Monday 11 March 2013

ವಚನ ಸಿಂಚನ ೬೫:ಹೆಣ್ಣು,ಆಧ್ಯಾತ್ಮ ಶಕ್ತಿ

ಸತ್ವಗೆಟ್ಟಲ್ಲಿ ಕಾಷ್ಟವನೂರಿ ನಡೆಯಬೇಕು
ಮತ್ತತ್ವ ವಿದ್ದಲ್ಲಿ ನಿಶ್ಚಯವ ಹೇಳಲಾಗಿ
ಮಹಾಪ್ರಸಾದವೆಂದು ಕೈಕೊಳಬೇಕು
ಎನ್ನ ಭಕ್ತಿಗೆ ನೀ ಶಕ್ತಿಯಾದ ಕಾರಣ
ಎನ್ನ ಸತ್ಯಕ್ಕೆ ನೀ  ಸತಿಯಾದ ಕಾರಣ
ಎನ್ನ ಸುಖ ದುಃಖ, ನಿನ್ನ ಸುಖ ದುಃಖ ಅನ್ಯವಿಲ್ಲ
ಇದಕ್ಕೆ ಭಿನ್ನ ಬೇಡವೇನು ಹೇಳಾ
ನಿಃಕಳಂಕ ಮಲ್ಲಿಕಾರ್ಜುನ
                        -ಮೋಳಿಗೆಯ ಮಾರಯ್ಯ

ಈ ವಚನದಲ್ಲಿ ಮೋಳಿಗೆಯ ಮಾರಯ್ಯ ತನ್ನ ಪತ್ನಿಯಾದ ಮಹಾದೇವಿಯಮ್ಮ ಹೇಗೆ ತನಗೆ ಆಧ್ಯಾತ್ಮದ ಹಾದಿಯಲ್ಲಿ ಊರುಗೋಲು ಆಗುತ್ತಾಳೆ ಎಂಬುದನ್ನು ಹೇಳುತ್ತಾನೆ.ತನ್ನ ಭಕ್ತಿಗೆ ಆಕೆಯೇ ಶಕ್ತಿ ಮತ್ತು ದೇವರನ್ನು ಕಂಡುಕೊಳ್ಳುವ ಸತ್ಯದಲ್ಲಿ ಆಕೆಯೇ ಸತಿ ಎಂದು ಹೇಳುತ್ತಾ ಗಂಡಿಗೆ ಹೆಣ್ಣಿನ ಅವಶ್ಯಕತೆ ಭಕ್ತಿ ಮಾರ್ಗದಲ್ಲಿ ಹೇಗೆ ಎಂದು ವಿವರಿಸುತ್ತಾನೆ . ಹಾಗೆ ಲೌಕಿಕ ಜೀವನದಲ್ಲಿ ಹೆಂಡತಿ ತನ್ನ ಸುಖ ದುಃಖ ಎರಡನ್ನೂ ಹಂಚಿಕೊಳ್ಳುವ ಸ್ವರೂಪಿಣಿ ಎನ್ನುತ್ತಾ ಶಿವನಲ್ಲಿ ಪ್ರಶ್ನಿಸುತ್ತಾ ನಮ್ಮಿಬ್ಬರಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು . ಏಕೆಂದರೆ ಅವರು ದೇವರನ್ನು ಕಂಡುಕೊಳ್ಳುವ ರೀತಿ ಮತ್ತು ಬಾಳ್ವೆ ಮಾಡಿದ ರೀತಿ ಇಬ್ಬರೂ ಸಮನಾಗಿ ಅನುಭವಿಸಿದರು ಎಂದು. ಅಂದರೆ ಇಲ್ಲಿ ೧೨ನೆ ಶತಮಾನದಲ್ಲಿ ಶರಣರು ನೀಡಿದ  ಸ್ತ್ರೀ ಸಮಾನತೆಯನ್ನು ಕೂಡ ಕಾಣಬಹುದು .

1 comment:

  1. ಮೋಳಿಗೆಯ ಮಾರಯ್ಯನವರು ಅದೇಕೋ ಹೆಚ್ಚು ಪ್ರಚಲಿತಕ್ಕೆ ಬಾರದ ವಚನಕಾರ. ಈ ವಚನವು ಲೌಕಿಕ ಜೀವನದಲ್ಲಿ ಸತಿಯ ಪ್ರಾಮುಖ್ಯತೆ ತುಂಬಾ ಚೆನ್ನಾಗಿ ವಿವರಿಸುತ್ತದೆ.

    ReplyDelete